ಹಾಸ್ಯನಟ ರಾಜು ಶ್ರೀವಾತ್ಸವ್ ನಿಧನ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ ಅವರನ್ನು ಆ. 10 ರಂದು ಹೃದಯಾಘಾತಕ್ಕೊಳಗಾದ ನಂತರ ರಾಜು ಏಮ್ಸ್ ಗೆ ದಾಖಲಿಸಲಾಗಿತ್ತು. ಅದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದಿದ್ದಾರೆ.

ರಾಜು ಶ್ರೀವಾತ್ಸವ್ ಅವರು ಸಮಯೋಚಿತ ಜೋಕುಗಳು ಮತ್ತು ಹಾಸ್ಯದ ಮೂಲಕ ಹಾಸ್ಯ ಜಗತ್ತಿನಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿದ್ದರು. 2005 ರಲ್ಲಿ ಪ್ರಥಮ ಪ್ರದರ್ಶನದೊಂದಿಗೆ ಮೊದಲ ಬಾರಿಗೆ ಸ್ಟ್ಯಾಂಡ್-ಅಪ್ ಕಾಮಿಡಿ ಟ್ಯಾಲೆಂಟ್ ಹಂಟ್ ಶೋ ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಮೂಲಕ ರಾಜು ಖ್ಯಾತಿ ಗಳಿಸಿದ್ದರು. ಮೈನೆ ಪ್ಯಾರ್ ಕಿಯಾ, ಬಾಜಿಗರ್, ಬಾಂಬೆ ಟು ಗೋವಾ ಮತ್ತು ಆಮ್ದಾನಿ ಅತ್ತಾನಿ ಖರ್ಚಾ ರುಪಾಯ ನಂತಹ ಹಿಂದಿ ಚಲನಚಿತ್ರಗಳಲ್ಲಿ ನಟನೆ ಮಾಡಿದ್ದರು. ಅಲ್ಲದೇ ಬಿಗ್ ಬಾಸ್ ಸೀಸನ್ ಮೂರರ ಸ್ಪರ್ಧಿಯಾಗಿದ್ದರು.

ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ಆದರೆ ಯಾರ ಪ್ರಾರ್ಥನೆಯೂ ಫಲಿಸಿಲ್ಲ. ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.