ಹೆಚ್.ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದಾರೆ.

ಪದ್ಮನಾಭ ನಗರದಲ್ಲಿರುವ ಹೆಚ್‌ಡಿಡಿ ನಿವಾಸಕ್ಕೆ ಸಿಎಂ ಬೊಮ್ಮಾಯಿ ತೆರಳಿದ್ದು, ಸಿಎಂ ಜೊತೆ ಸಚಿವರಾದಆರ್. ಅಶೋಕ್, ಸೋಮಣ್ಣ, ಕೆ. ಗೋಪಾಲಯ್ಯ, ಭೈರತಿ ಬಸವರಾಜ, ಮುನಿರತ್ನ, ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಸೇರಿ ಹಲವು ಸಚಿವರು ಸದನ ಬಿಟ್ಟು ದೇವೇಗೌಡರ ಮನೆಗೆ ತೆರಳಿದ್ದಾರೆ.