ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ ಹಾಗೂ ಅಪೌಷ್ಠಿಕ ಕಿಟ್ ವಿತರಣೆ

ಭಟ್ಕಳ: ಬಿಜೆಪಿ ಮಂಡಲ ವತಿಯಿಂದ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಕಾರ್ಯಕ್ರಮದ 5 ನೇ ದಿನವಾದ ಇಂದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಅಪೌಷ್ಠಿಕ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ ಹಾಗೂ ಅಪೌಷ್ಠಿಕ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಮಕ್ಕಳಿಗೂ ಪೌಷ್ಠಿಕ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ಶ್ರೀ ಗೋವಿಂದ ನಾಯ್ಕ, ಮಂಡಲದ ಅಧ್ಯಕ್ಷರಾದ ಶ್ರೀ ಸುಬ್ರಾಯ ದೇವಾಡಿಗ, ಜಿಲ್ಲಾ ಮಾಜಿ ಸೈನಿಕರ ಪ್ರಕೋಸ್ಟ  ಸಂಚಾಲಕರರಾದ ಶ್ರೀಕಾಂತ ನಾಯ್ಕ, ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಡಾ. ಸವಿತಾ ಕಾಮತ್, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸುಶೀಲ ಮೊಗೇರ, ವೈದ್ಯರಾದ ಡಾ. ಸುರಕ್ಷಿತ ಶೆಟ್ಟಿ ಹಾಗೂ ಪ್ರಸನ್ನ ನಾಯಕ, ಮಂಡಲ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಂಚಾಲಕರಾದ ಮೋಹನ ನಾಯ್ಕ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.