ಮುಖ್ಯ ರಸ್ತೆಯಲ್ಲಿ ಧರೆ ಕುಸಿಯುವ ಭೀತಿ.!

ಸಿದ್ದಾಪುರ: ತಾಲೂಕಿನ ವಾಜಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊದ್ಲಮನೆ ಮುಖ್ಯ ರಸ್ತೆಯ ಕೆಳಗಿನಸಶಿ ಬಳಿ ಧರೆ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಮತ್ತೆ ಧರೆ ಕುಸಿಯುವ ಸಾಧ್ಯತೆ ಇದ್ದು ವಾಹನ ಸಂಚಾರಕ್ಕೆ ತೊಂದರೆಯಾಗುವ ಲಕ್ಷಣ ಗೋಚರಿಸುತ್ತಿದೆ. ಮಳೆ ಹೀಗೇ ಮುಂದುವರಿದಲ್ಲಿ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ವಾಜಗೋಡ ಗ್ರಾಪಂ ಸದಸ್ಯ ಕೃಷ್ಣಮೂರ್ತಿ ನಾಯ್ಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *