ಟ್ರಾಕ್ಟರ್ ಪಲ್ಟಿಯಾಗಿ 10 ಮಂದಿ ದುರ್ಮರಣ.! ಉ.ಪ್ರದೇಶದಲ್ಲೊಂದು ಭೀಕರ ದುರಂತ

ಉತ್ತರ ಪ್ರದೇಶ: ಸೀತಾಪುರದಿಂದ 47 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ ಘಟನೆ ಸೋಮವಾರ ಉತ್ತರ ಪ್ರದೇಶದ ಲಖನೌ ಸಮೀಪ ನಡೆದಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಜನರು ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಈ ಸಮಯದಲ್ಲಿ ಟ್ರ್ಯಾಕ್ಟರ್‌ನ ಟ್ರಾಲಿ ಅಸಮತೋಲನಗೊಂಡು ಹೊಂಡಕ್ಕೆ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಧಾವಿಸಿ 37 ಜನರನ್ನು ರಕ್ಷಿಸಲಾಗಿದ್ದು, ಆರೋಗ್ಯವಾಗಿದ್ದಾರೆ. ಆಸ್ಪತ್ರೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಲಕ್ನೋ ಐಜಿ ಲಕ್ಷ್ಮಿ ಸಿಂಗ್ ತಿಳಿಸಿದ್ದಾರೆ. ಇನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.