ಉಡುಪಿಯಲ್ಲೂ ಸರ್ಕಾರದ ವಿರುದ್ಧ ‘ಪೇಸಿಎಂ’ ಅಭಿಯಾನ.! ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ: ಜಿಲ್ಲೆಯಲ್ಲಿ ಯೂತ್ ಕಾಂಗ್ರೆಸ್ ಪೇ ಸಿಎಂ ಅಭಿಯಾನ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಂಕ್ಷನ್ ಫ್ಲೈ ಓವರ್ ಗೆ ಪೇ ಸಿಎಂ ಪೋಸ್ಟರ್ ಅಂಟಿಸಲಾಗಿದೆ. ಯೂತ್ ಕಾಂಗ್ರೆಸ್ ನ ಕಾರ್ಯಕರ್ತರು ಪೇ ಸಿಎಂ ಅಭಿಯಾನ ನಡೆಸಿದ್ದು ಅಂಡರ್ ಪಾಸ್ ಗೋಡೆಗೆ ಪೋಸ್ಟರ್ ಅಂಟಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ 40% ಕಮೀಷನ್ ಆರೋಪ ಮಾಡಿದ್ದಾರೆ.