PFI ಬ್ಯಾನ್ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು.?

ಬೆಂಗಳೂರು: ಪಿಎಫ್​ಐ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು ಪಿಎಫ್​ಐ ಬ್ಯಾನ್ ಯಾವಾಗ ಎಂದು ಪ್ರಶ್ನಿಸುತ್ತಿದ್ದರು. ಈ ಪ್ರಶ್ನೆಗೆ ಇದೀಗ ಕೇಂದ್ರ ಸರ್ಕಾರ ದಿಟ್ಟ ಉತ್ತರ ನೀಡಿದೆ. ಪಿಎಫ್​​ಐ ನಿಷೇಧಿಸುವಂತೆ ವಿರೋಧ ಪಕ್ಷದವರೂ ಸೇರಿದಂತೆ ಎಲ್ಲರೂ ಮನವಿ ಮಾಡಿದ್ದೆವು. ಹಲವು ಉಗ್ರಗಾಮಿ ಸಂಘಟನೆಗಳಿಗೆ ಪಿಎಫ್​ಐ ರಿಮೋಟ್​ ಕಂಟ್ರೋಲ್​ ಆಗಿತ್ತು. ಪಿಎಫ್​ಐ ಕಾರ್ಯಕರ್ತರು ಹಲವು ಉಗ್ರಗಾಮಿ ಸಂಘಟನೆಗಳಲ್ಲಿ ತರಬೇತಿ ಪಡೆದು, ದುಷ್ಕೃತ್ಯ ನಡೆಸಲು ಮುಂದಾಗಿದ್ದರು. ಹಲವು ದೇಶದ್ರೋಹ ಚಟುವಟಿಕೆಗಳಲ್ಲಿಯೂ ಪಿಎಫ್​ಐ ಭಾಗಿಯಾಗಿತ್ತು ಎಂದು ಹೇಳಿಕೆ ನೀಡಿದ್ದಾರೆ.

ಇನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ನೀಡಿದ್ದು ಪಿಎಫ್​ಐ ನಿಷೇಧವನ್ನು ಸ್ವಾಗತಿಸಿದ್ದಾರೆ. ದುಷ್ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್​ಐ ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಈ ಸಂಘಟನೆಗಳ ಬಗ್ಗೆ ಕೇಂದ್ರ ಸರ್ಕಾರವು ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮ ಎಂದು ಹೇಳಿದ್ದಾರೆ.