ಬೆಂಗಳೂರು: ಬಾಗ್ಮನೆ ಡೆವಲಪರ್ನಿಂದ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ವಿಚಾರಕ್ಕೆ ಲೋಕಾಯುಕ್ತ ಮಧ್ಯ ಪ್ರವೇಶಿಸಿದ್ದು, ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಮಹಾನಗರದಲ್ಲಿ ಕಳೆದ 15 ದಿನಗಳಿಂದ ರಾಜಕಾಲುವೆ ಮತ್ತು ಕೆರೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬಿಬಿಎಂಪಿ ತೆರವು ಮಾಡುತ್ತಿದೆ. ಹಾಗೇ ಮಹಾದೇವಪುರ ನಗರದಲ್ಲಿರುವ ಬಾಗ್ಮನೆ ಡೆವಲಪರ್ನಿಂದ ರಾಜಕಾಲುವೆ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿತ್ತು.
ಸೂಚನೆ ಮೇರೆಗೆ ಬಿಬಿಎಂಪಿ ತೆರವು ಕಾರ್ಯ ಕೈಗೊಂಡಾಗ, ಬಿಲ್ಡರ್ ಭಾನುವಾರದಂದು ಲೋಕಾಯುಕ್ತದ ಮೊರೆ ಹೋಗಿದ್ದರು. ನಂತರ ಲೋಕಾಯುಕ್ತ ಭಾನುವಾರ ಒತ್ತುವರಿ ತೆರವಿಗೆ ತಡೆ ನೀಡಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್ ರಾಜಕಾಲುವೆ ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶಿಸಿದೆ. ಈ ಮಧ್ಯೆ ಲೋಕಾಯುಕ್ತ ಕಾಯ್ದೆ ಮೀರಿ ಮಧ್ಯ ಪ್ರವೇಶಿಸಿದ್ದು ಏಕೆ.? ಲೋಕಾಯುಕ್ತ ಕಾಯ್ದೆಯಡಿ ತಡೆ ನೀಡುವ ಅಧಿಕಾರವಿದೆಯೇ.? ಲೋಕಾಯುಕ್ತ ಕಚೇರಿಯೇ ಒತ್ತುವರಿ ತೆರವಿಗೆ ತಡೆ ನೀಡಬಹುದೇ.? ಜನ ಕೋರ್ಟ್ ಬದಲು ಲೋಕಾಯುಕ್ತಕ್ಕೆ ಹೋಗಬಹುದಲ್ಲವೇ.? ವ್ಯಾಪ್ತಿ ಮೀರಿದ ಆದೇಶ ನೀಡಲು ನಾವು ಅವಕಾಶ ನೀಡುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಲೋಕಾಯುಕ್ತದಿಂದ ಸಮಾನಾಂತರ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.


