ಕಾಲುಜಾರಿ ತೆರೆದ ಬಾವಿಗೆ ಬಿದ್ದ ಮೂರು ಎಮ್ಮೆಗಳ ರಕ್ಷಣೆ

ಭಟ್ಕಳ: ಮೇವು ತಿನ್ನಲು ಬಂದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ತೆರೆದ ಬಾವಿಗೆ ಬಿದ್ದಿದ್ದ ಮೂರು ಎಮ್ಮೆಗಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಪಟ್ಟಣದ ಬೆಳಲಖಂಡ ಗ್ರಾಮದಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಮುಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಲಖಂಡ ಗ್ರಾಮದಲ್ಲಿ ಮೇವು ತಿನ್ನುತ್ತಿರುವ ವೇಳೆ ಮೂರು ಎಮ್ಮೆಗಳು ಆಕಸ್ಮಿಕವಾಗಿ ಕಾಲುಜಾರಿ ತೆರೆದ ಬಾವಿಗೆ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರಾದ ಶೇಷಗಿರಿ ನಾಯ್ಕ ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಠಾಣಾಧಿಕಾರಿ ಎಸ್.ರಮೇಶ, ಸಿಬ್ಬಂದಿಗಳೊಡನೆ ತೆರಳಿ ಸಾರ್ವಜನಿಕರ್ ಸಹಾಯದೊಂದಿಗೆ ಮೂರು ಎಮ್ಮೆಗಳನ್ನು ಬಾವಿಯಿಂದ ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಭಟ್ಕಳ ಅಗ್ನಿಶಾಮಕ ದಳ ಸಿಬ್ಬಂದಿ ,ಎಸ್.ಡಿ.ಆರ್.ಆಫ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು