‘RSS ಬ್ಯಾನ್ ಮಾಡಲಿ’ ಎಂಬ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಆರ್​ಎಸ್​ಎಸ್ ಬ್ಯಾನ್ ಮಾಡಬೇಕು ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, RSS ಸಂಘಟನೆಯನ್ನ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಲು ಪ್ರಧಾನಿ ನೆಹರು ಅವರು ಆಹ್ವಾನಿಸಿದ್ದು ಸಿದ್ದರಾಮಯ್ಯಗೆ ಗೊತ್ತಿಲ್ಲವೇ.? ಎಂದು ಪ್ರಶ್ನಿಸಿದರು.

ಆರ್​ಎಸ್​ಎಸ್​ ಟೀಕೆ ಮಾಡೋದಕ್ಕೂ ಮುನ್ನ ಸಿದ್ದು ಅರಿತುಕೊಳ್ಳಲಿ. ಆರ್​ಎಸ್​ಎಸ್ ರಾಷ್ಟ್ರಭಕ್ತ ಸಂಘಟನೆ. ರಾಷ್ಟ್ರ ನಿರ್ಮಾಣದ ಕೆಲಸ ಮಾಡ್ತಿದೆ. ರಾಜಕೀಯಕ್ಕಾಗಿ ಟೀಕೆ ಬೇಡ ಎಂದು ಬೆಂಗಳೂರಿನಲ್ಲಿ ಸಚಿವ ಕೋಟಾ ತಿರುಗೇಟು ನೀಡಿದರು.