ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ, ಹುಚ್ಚಾಸ್ಪತ್ರೆಗೆ ಸೇರಿಸಬೇಕು – ಶಾಸಕ ಅಪ್ಪಚ್ಚು ರಂಜನ್

ಮಡಿಕೇರಿ: ಆರ್‌ಎಸ್‍ಎಸ್ ಬ್ಯಾನ್‌ ಮಾಡಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಅಪ್ಪಚ್ಚು ರಂಜನ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ಆರ್‌ಎಸ್‍ಎಸ್‍ ರಾಷ್ಟ್ರೀಯ ಚಿಂತನೆಯಲ್ಲಿ ತೊಡಗಿದೆ. ನಾವು ಕೂಡ ಆರ್‌ಎಸ್‍ಎಸ್‍ನಿಂದ ಬಂದವರು. ಸಂಘ ದೇಶ ಪ್ರೇಮ ಹಾಗೂ ದೇಶ ಭಕ್ತಿಯನ್ನು ಕಲಿಸುತ್ತದೆ. ದೇಶ ಒಡೆಯುವ ಕೆಲಸವನ್ನು ಆರ್‌ಎಸ್‍ಎಸ್ ಮಾಡುವುದಿಲ್ಲ. ಯಾವುದೇ ಬಾಂಬ್ ಹಾಕಲು ಕೂಡ ಕಲಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಹೀಗೆ ಅರ್ಥವಿಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಸಿದ್ದರಾಮಯ್ಯರ ಮಾತನ್ನು ಯಾರೂ ಒಪ್ಪುವುದಿಲ್ಲ. ಈಗಾಗಲೇ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಪಿಎಫ್‍ಐ ಬ್ಯಾನ್ ಆಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.