ಗೋವಿಗೆ ಪೂಜೆ ಸಲ್ಲಿಸಿ, ಪ್ರೀತಿಯಿಂದ ಮುತ್ತಿಟ್ಟ ಸಿಎಂ ಬೊಮ್ಮಾಯಿ

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ‌ ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದ ಬಳಿ ಎಪ್ಪತ್ತು ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೆಗಾ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಸಿಎಂ ಬೊಮ್ಮಾಯಿ ಗೋವಿಗೆ ಪೂಜೆ ಸಲ್ಲಿಸಿ, ಕರುವಿಗೆ ಮುತ್ತಿಟ್ಟು, ಗೋವಿಗೆ ಅಕ್ಕಿ ತಿನ್ನಿಸಿದರು.

ಸಿಎಂ ಜೊತೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಕೃಷಿ ಸಚಿವ ಬಿ.ಸಿ.ಪಾಟೀಲ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ನೆಹರು ಓಲೇಕಾರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.