ಇನ್ಮುಂದೆ ಬೇಕಾಬಿಟ್ಟಿ ಗ್ರಾಹಕರಿಂದ ಸುಲಿಗೆ ಮಾಡುವಂತಿಲ್ಲ.! App ಆಧಾರಿತ ಕಂಪೆನಿಗಳ ಮೇಲೆ ಸಾರಿಗೆ ಇಲಾಖೆ ಹದ್ದಿನಕಣ್ಣು

ಬೆಂಗಳೂರು: App ಆಧಾರಿತ ಸಾರಿಗೆ ಸಂಸ್ಥೆಗಳು ಗ್ರಾಹಕರಿಂದ ದುಪ್ಪಟು ಹಣ ವಸೂಲಿ ಮಾಡುತ್ತಿದೆ ಎಂಬ ಆರೋಪವಿದೆ. ನಗರದಲ್ಲಿ ಸಾಮಾನ್ಯವಾಗಿ ನಾವು ಎಲ್ಲಾದರೂ ಹೋಗಬೇಕು ಅಂದರೆ ಸಾರ್ವಜನಿಕ ಸಾರಿಗೆ ಬಳಸುತ್ತೇವೆ. ಅದರಲ್ಲೂ ಟ್ಯಾಕ್ಸಿ, ಆಟೋ, ಕ್ಯಾಬ್‌ ಎಂಬ App ಆಧಾರಿತ ಸೇವೆಗಳನ್ನು ಬಳಸುವುದೇ ಜಾಸ್ತಿ. ಹೀಗಾಗಿ ಪ್ರಯಾಣಿಕರು ಅಗತ್ಯಕ್ಕೋ, ಅನಿವಾರ್ಯತೆಗಾಗಿಯೋ ದುಪ್ಪಟ್ಟು ಹಣ ಕೊಡಬೇಕಾಗಿದೆ.

ಈ ಬಗ್ಗೆ ಸಾರ್ವಜನಿಕರು ಸಾರಿಗೆ ಇಲಾಖೆಗೆ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಕೊನೆಗೂ ಎಚ್ಚೆತ್ತಿರುವ ಸಾರಿಗೆ ಇಲಾಖೆ ಆಪರೇಷನ್ ಸಾರಿಗೆ ಶುರು ಮಾಡಿದೆ. ಖುದ್ದು ಸಾರ್ವಜನಿಕರು ದೂರು ಕೊಡಲು ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. App ಆಧಾರಿತ ಟ್ಯಾಕ್ಸಿ ಕ್ಯಾಬ್ ಆಟೋಗಳು ಪ್ರಯಾಣಿಕರಿಗೆ ದುಬಾರಿ ದುಡ್ಡು ನೀಡುವಂತೆ ಡಿಮ್ಯಾಂಡ್ ಮಾಡಿದರೆ ಇದೀಗ ಸಹಾಯವಾಣಿಗೆ ಕರೆ ಮಾಡಿ ದೂರು ಕೊಡಬಹುದು. ಈ ಮೂಲಕ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಲಿದೆ.