ಪಾಕಿಸ್ತಾನ ಅಂತಾರಾಷ್ಟ್ರೀಯ ಭಯೋತ್ಪಾದನೆಯಲ್ಲಿ ಪರಿಣತಿ ಹೊಂದಿದೆ – ಜೈಶಂಕರ್

ಗುಜರಾತ್: ಮಾಹಿತಿ ತಂತ್ರಜ್ಞಾನದಲ್ಲಿ ಭಾರತ ಪರಿಣತಿ ಹೊಂದಿದೆ. ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದನೆಯಲ್ಲಿ ಪರಿಣತಿ ಹೊಂದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಗುಜರಾತ್‌ನ ವಡೋದರಾದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿ, ಇಂದು ನೀವು ನಮ್ಮ ವಿರುದ್ಧ ಭಯೋತ್ಪಾದನೆಯನ್ನು ಸೃಷ್ಟಿಸುತ್ತಿದ್ದೀರಿ, ನಾಳೆ ನಿಮ್ಮ ವಿರುದ್ಧವೂ ಅದೇ ಭಯೋತ್ಪಾದನೆ ಕೆಲಸ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈಗ ವಿಶ್ವದಲ್ಲಿ ಭಯೋತ್ಪಾದನೆಯ ಬಗ್ಗೆ ತಿಳಿವಳಿಕೆ ಉತ್ತಮವಾಗಿದ್ದು, ಇನ್ನು ಮುಂದೆ ಜಗತ್ತು ಅದನ್ನು ಸಹಿಸುವುದಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ