ಉತ್ತರಾಖಂಡ್ ನಲ್ಲಿ ಭಾರೀ ಹಿಮಕುಸಿತ: 8 ಜನರ ರಕ್ಷಣೆ, 20 ಮಂದಿ ಕಣ್ಮರೆ.!

ಉತ್ತರಾಖಂಡ್: ದ್ರೌಪದಿಯ ದಂಡ-2 ಶಿಖರದಲ್ಲಿ ತೀವ್ರ ​ಹಿಮಪಾತ ಸಂಭವಿಸಿದ್ದು, ನೆಹರು ಪರ್ವತಾರೋಹಣ ಸಂಸ್ಥೆಯ 20 ಪರ್ವತಾರೋಹಿಗಳು ಸಿಲುಕಿದ್ದಾರೆ. ಜಿಲ್ಲಾಡಳಿತ ತ್ವರಿತ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ.

2 ಚೀತಾ ಹೆಲಿಕಾಪ್ಟರ್​ಗಳು ರಕ್ಷಣಾ ಕಾರ್ಯಕ್ಕೆ ಇಳಿದಿದ್ದು, 8 ಮಂದಿಯನ್ನ ರಕ್ಷಣೆ ಮಾಡಿರುವ ಮಾಹಿತಿ ತಿಳಿದು ಬಂದಿದೆ. ಎನ್.​​ಡಿ.ಆರ್.​​ಎಫ್, ಎಸ್​​ಡಿಆರ್​​ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಈ ಘಟನೆಗೆ ಬೇಸರ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ತಿಳಿಯಲು ನಾನು ಐಎಎಫ್ ಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.