ಗಾಳಿಯ ರಭಸಕ್ಕೆ ವಿದ್ಯುತ್ ಕಂಬದ ಮೇಲೆ ಬಿದ್ದ ಮರ

ಯಲ್ಲಾಪುರ: ತಾಲೂಕಿನಲ್ಲಿ ಗುರುವಾರ ಮಳೆ ಸ್ವಲ್ಪ ಪ್ರಮಾಣದಲ್ಲಿ ಬಿಡುವು ನೀಡಿದೆ. ಆದರೆ ಗಾಳಿಯ ಅಬ್ಬರ ಹೆಚ್ಚಿದ್ದು, ಪರಿಣಾಮ ಪಟ್ಟಣದ ಗೋಪಾಲಕೃಷ್ಣ ಗಲ್ಲಿಯಲ್ಲಿ ಬ್ರಹತ್ ಗಾತ್ರದ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾಗಿದೆ. ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಮರ ತೆರವುಗೊಳಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿದರು.

Leave a Reply

Your email address will not be published. Required fields are marked *