ನೂತನ ಆರೋಗ್ಯ ಕೇಂದ್ರಕ್ಕೆ ಸಂಸದ ತೇಜಸ್ವಿಯೊಂದಿಗೆ ಭೇಟಿ ನೀಡಿದ ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ರಾಜಮಹಲ್ ನಗರದಲ್ಲಿ ಸ್ಥಾಪಿಸಲಾಗಿರುವ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳೀಯ ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಭೇಟಿ ನೀಡಿದರು. ಸಂಸದ ತೇಜಸ್ವಿ ಸೂರ್ಯ ಅವರ ಜತೆ ಭೇಟಿ ನೀಡಿದ ಸಚಿವರು, ಆಸ್ಪತ್ರೆಯಲ್ಲಿ ಕಲ್ಪಿಸಲಾಗಿರುವ ಆರೋಗ್ಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಆಸ್ಪತ್ರೆ ಸಿಬ್ಬಂದಿ ಜೊತೆ ಕೆಲವು ಸಮಯ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವೈದ್ಯರು, ಸಂಸದರು, ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರು, ಅಧಿಕಾರಿಗಳು ಸೇರಿದಂತೆ ಇನ್ನಿತರರ ಮುಖಂಡರು ಉಪಸ್ಥಿತರಿದ್ದರು.