ಜ್ಞಾನವಾಪಿ ಮಸೀದಿಯ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆಯ ಅರ್ಜಿ ವಿಚಾರಣೆ: ಅ. 11 ಕ್ಕೆ ತೀರ್ಪು

ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್‌ ಡೇಟಿಂಗ್ ಪರೀಕ್ಷೆ ನಡೆಸುವಂತೆ ಹಿಂದು ಪರ ಭಕ್ತರು ಅರ್ಜಿ ಸಲ್ಲಿಸಿದ್ದರು. ಇಂದು ವಾರಣಾಸಿ ಜಿಲ್ಲಾ ಕೋರ್ಟ್‌ ಅರ್ಜಿ ವಿಚಾರಣೆ ನಡೆಸಿದ್ದು, ಅ. 11 ರಂದು ಇದರ ತೀರ್ಪು ನೀಡುವುದಾಗಿ ಹೇಳಿದೆ. ಅಲ್ಲಿಯವರೆಗೂ ಈ ಪ್ರಕರಣದ ಕುರಿತು ಯಾವುದೇ ವಿಚಾರಣೆ ನಡೆಯುವುದಿಲ್ಲ ಎಂದು ತಿಳಿಸಿದೆ.