ಬಹ್ರೈಚ್​ನಲ್ಲಿ ಮರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಐವರು ಸಾವು: ಸಿಎಂ ಆದಿತ್ಯನಾಥ್ ಸಂತಾಪ

ಉತ್ತರ ಪ್ರದೇಶ: ಮೆರವಣಿಗೆ ವೇಳೆ ವಿದ್ಯುತ್​​ ತಂತಿ ಸ್ಪರ್ಶಿಸಿ ಐವರು ಮೃತಪಟ್ಟಿರುವ ಘಟನೆ ಬಹ್ರೈಚ್​ನಲ್ಲಿ ನಡೆದಿದೆ. ಸ್ಥಳದಲ್ಲೇ 4 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೈಟೆನ್ಷನ್ ತಂತಿಯ ಕಬ್ಬಿಣದ ರಾಡ್‌ಗೆ ವ್ಯಕ್ತಿಗಳು ಸ್ಪರ್ಶಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ಸೂಚನೆಯನ್ನು ನೀಡಿದ್ದಾರೆ.