ಉತ್ತರಕಾಶಿ ಹಿಮಪಾತದಲ್ಲಿ ಇಬ್ಬರು ಕನ್ನಡಿಗರು ಸಾವು

ಬೆಂಗಳೂರು: ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡದಲ್ಲಿದ್ದ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಅ. 8 ರಂದು ನಡೆದ ಕಾರ್ಯಾಚರಣೆಯಲ್ಲಿ ಬೆಂಗಳೂರು ಮೂಲದ ವಿಕ್ರಮ್, ರಶ್ಮಿತ್ ಎಂಬ ಯುವಕರ ಮೃತದೇಹ ಪತ್ತೆಯಾಗಿದೆ.

ಕಳೆದ ಮಂಗಳವಾರ ಹಿಮಪಾತ ಸಂಭವಿಸಿ 40 ಮಂದಿ ನಾಪತ್ತೆಯಾಗಿದ್ದರು. ಇಲ್ಲಿಯವರೆಗೆ ಹಿಮಪಾತದಿಂದ ಒಟ್ಟು 29 ಮಂದಿ ಸಾವನ್ನಪ್ಪಿದ್ದು, ವಿಪತ್ತು ನಿರ್ವಹಣಾ ತಂಡಗಳು ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.