ವಿಜಯಪುರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಕಂಟ್ರೀ ಪಿಸ್ತೂಲ್ ಮಾಫಿಯಾ.! ಪೊಲೀಸರ ದಾಳಿ, ನಾಲ್ವರ ಬಂಧನ.!

ವಿಜಯಪುರ: ಜಿಲ್ಲೆಯಲ್ಲಿ ಅನಧೀಕೃತ ಪಿಸ್ತೂಲ್ ಮಾಫಿಯಾ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸರು ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಟಗಿ ತಾಂಡಾದಲ್ಲಿ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ಒಂದು ಕಂಟ್ರೀ ಪಿಸ್ತೂಲ್, ಒಂದು ಜೀವಂತ ಗುಂಡು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನಾಲ್ವರನ್ನು ಬಂಧಿಸಿ, ಅವರ ಬಳಿಯಿದ್ದ ಒಂದು ಕಾರ್ ಹಾಗೂ ಒಂದು ಸ್ಕಾರ್ಪಿಯೋ ವಾಹನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ