ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 8.30ರ ಸುಮಾರಿಗೆ ನಿಧನರಾದರು.

ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮುಲಾಯಂ ಸಿಂಗ್ ಯಾದವ್ ನಿಧನರಾಗಿದ್ದಾರೆ ಎಂದು ಯುಪಿ ಮಾಜಿ ಸಿಎಂ ಹಾಗೂ ಮುಲಾಯಂ ಸಿಂಗ್ ಪುತ್ರ ಅಖಿಲೇಶ್‌ ಯಾದವ್‌ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಮಾಜವಾದಿ ಪಕ್ಷದ ಅಧಿಕೃತ ಟ್ವಿಟ್ಟರ್‌ ಖಾತೆ ಟ್ವೀಟ್‌ ಮಾಡಿದೆ.

ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.