ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ನೇಮಕ

ಬೆಂಗಳೂರು: ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪ್ರಸನ್ನ ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಟ್ವಿಟರ್‌ ಮೂಲಕ ತಿಳಿಸಿದ್ದಾರೆ.

ನ್ಯಾ. ವರಾಳೆ ಅವರು1985 ರ ಆಗಸ್ಟ್ 12 ರಂದು ವಕೀಲರಾಗಿ ಸೇವೆ ಆರಂಭಿಸಿದರು. ಬಳಿಕ 1990-1992 ರವರೆಗೆ ಔರಂಗಾಬಾದ್​ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ, ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ ಹೈಕೋರ್ಟ್ ಪೀಠದಲ್ಲಿ ತಮ್ಮ ಸೇವೆ ಸಲ್ಲಿಸಿದ್ದಾರೆ.